ಬಿ ಆರ್ ಲಕ್ಷ್ಮಣರಾವ್

Poetry needs more than mere talent: B R Lakshman …

ಅರವತ್ತು ತುಂಬಿದ ಕವಿಗೆ ….

ಬಿ.ಆರ್.ಲಕ್ಷ್ಮಣರಾವ್

ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ , ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ.

ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.

B.R. Lakshman Rao - He deals with words, in this …

ಜನನ,ವಿದ್ಯಾಭ್ಯಾಸ

[ಬದಲಾಯಿಸಿ]

ಬಿ.ಆರ್.ರಾಜಾರಾವ್‌ ಮತ್ತು ವೆಂಕಟಲಕ್ಷ್ಮಮ್ಮನವರ ಮಗನಾಗಿ 'ಲಕ್ಷ್ಮಣ್,' ಚಿಕ್ಕಬಳ್ಳಾಪುರ ಜಿಲ್ಲೆಯ 'ಚೀಮಂಗಲ'ದಲ್ಲಿ ೧೯೪೬ ರ ಸೆಪ್ಟಂಬರ್ 9ರಂದು ಜನಿಸಿದರು. ಲಕ್ಷ್ಮಣರ ಪ್ರಾರಂಭಿಕ ಶಿಕ್ಷಣ ಚಿಂತಾಮಣಿಯಲ್ಲಿ ನೆರವೇರಿತು. ಬೆಂಗಳೂರು ವಿಶ್ವವಿದ್ಯಾಲಯದಿಂದ ಬಿ.ಎ; ಮತ್ತು ಬಿ.ಎಡ್.‌ ಪದವಿಗಳನ್ನೂ ಹಾಗೂ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ; ಪದವಿಯನ್ನೂ ಗಳಿಸಿದರು.

ಬರವಣಿಗೆ ಚಿಕ್ಕವಯಸ್ಸಿನಲ್ಲೇ

[ಬದಲಾಯಿಸಿ]

ಇನ್ನು ಕಾಲೇಜಿನಲ್ಲಿ ಓದುತ್ತಿರುವಾಗಲೇ, ಲಕ್ಷ್ಮಣರಾವ್, ಹಲವಾರು ಕವನಗಳನ್ನು ಬರೆದರು. ಅವೆಲ್ಲಾ 'ಲಹರಿ', 'ಗೋಕುಲ', 'ಸಂಕ್ರಮಣ' ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದವು. ನವ್ಯ ಸಾಹಿತ್ಯದ ಚಳವಳಿ ಮೊದಲುಗೊಂಡು, 'ಚುಟುಕು', 'ವಿಡಂಬನೆ', ಭಾವಗೀತೆ' ಮತ್ತು ಇತರ ಎಲ್ಲ ಪ್ರಕಾರಗ